ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರ, ಶೀತ, ಕೆಮ್ಮಿನ ಚಿಕಿತ್ಸೆಗಾಗಿ ಜನ ಕಿಕ್ಕಿರಿದು ಸೇರುತ್ತಿದ್ದಾರೆ. ಇವರ್ಯಾರಿಗೂ ಕೊರೊನಾ ಪರೀಕ್ಷೆ ನಡೆಯುತ್ತಿಲ್ಲ. ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸುವವರಿಲ್ಲ. ಲಸಿಕೆ ನೀಡಿಕೆಯು ಕುಂಟುತ್ತಾ ಸಾಗಿದೆ. ಹೀಗೇ ಮುಂದುವರಿದರೆ ಪರಿಸ್ಥಿತಿ ಹದಗೆಡುವ ಎಲ್ಲಾ ಸಾಧ್ಯತೆ ಇದೆ. ಜಿಲ್ಲಾ ಆಡಳಿತವು ಎಚ್ಚೆತ್ತುಕೊಳ್ಳಬೇಕು. ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಇಲ್ಲವಾದರೆ ಸೋಂಕಿನ ತೀವ್ರತೆ ಹೆಚ್ಚಾಗುವ ಸಂಭವವಿದೆ.