<p>ಕೋವಿಡ್ನಿಂದ ಮೃತಪಟ್ಟವರಿಗೆ ಪರಿಹಾರ ನೀಡಲಾಗದು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿರುವುದು ಸೂಕ್ತ ತೀರ್ಮಾನವಲ್ಲ. ಮೃತಪಟ್ಟವರಲ್ಲಿ ಎಷ್ಟೋ ಜನ ಆಯಾ ಕುಟುಂಬಕ್ಕೆ ಆದಾಯದ ಮೂಲಗಳಾಗಿದ್ದರು. ಇಂದು ಕುಟುಂಬಗಳು ಅಂತಹ ವ್ಯಕ್ತಿಗಳನ್ನು ಕಳೆದುಕೊಂಡು ದುಃಖದಲ್ಲಿರುವ ಸಂದರ್ಭದಲ್ಲಿ, ಸರ್ಕಾರ ತನ್ನ ಈ ತೀರ್ಮಾನದಿಂದ ಮತ್ತೆ ಅವರ ಗಾಯದ ಮೇಲೆ ಬರೆ ಎಳೆದಂತಾಗಿದೆ. ನೂರಾರು ಜನರು ಸೂಕ್ತ ಸಮಯಕ್ಕೆ ಆಕ್ಸಿಜನ್, ಹಾಸಿಗೆ, ವೆಂಟಿಲೇಟರ್ಗಳು ಸಿಗದೆ ಸಾವನ್ನಪ್ಪಿದ್ದಾರೆ. ಇವನ್ನು ಸಹಜ ಸಾವುಗಳು ಅನ್ನಲು ಬರುವುದಿಲ್ಲ. ಆರೋಗ್ಯ ಕೇಂದ್ರಗಳಲ್ಲಿನ ಲೋಪದೋಷಗಳಿಂದ ಈ ಸಾವುಗಳು ಸಂಭವಿಸಿರುವುದರಿಂದ ಇದು ಜೀವಿಸುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ.</p>.<p>ಆರೋಗ್ಯ ಕ್ಷೇತ್ರದ ಬಗೆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಇಂತಹ ಘಟನೆಗಳು ಸಂಭವಿಸಿದ್ದು, ಇದರ ನೇರ ಹೊಣೆಗಾರಿಕೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಹೀಗಿರುವಾಗ, ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ.<br /><br />-<strong><em>ನಾಗೇಶ್ ಹರಳಯ್ಯ, ಕಲಬುರ್ಗಿ</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋವಿಡ್ನಿಂದ ಮೃತಪಟ್ಟವರಿಗೆ ಪರಿಹಾರ ನೀಡಲಾಗದು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿರುವುದು ಸೂಕ್ತ ತೀರ್ಮಾನವಲ್ಲ. ಮೃತಪಟ್ಟವರಲ್ಲಿ ಎಷ್ಟೋ ಜನ ಆಯಾ ಕುಟುಂಬಕ್ಕೆ ಆದಾಯದ ಮೂಲಗಳಾಗಿದ್ದರು. ಇಂದು ಕುಟುಂಬಗಳು ಅಂತಹ ವ್ಯಕ್ತಿಗಳನ್ನು ಕಳೆದುಕೊಂಡು ದುಃಖದಲ್ಲಿರುವ ಸಂದರ್ಭದಲ್ಲಿ, ಸರ್ಕಾರ ತನ್ನ ಈ ತೀರ್ಮಾನದಿಂದ ಮತ್ತೆ ಅವರ ಗಾಯದ ಮೇಲೆ ಬರೆ ಎಳೆದಂತಾಗಿದೆ. ನೂರಾರು ಜನರು ಸೂಕ್ತ ಸಮಯಕ್ಕೆ ಆಕ್ಸಿಜನ್, ಹಾಸಿಗೆ, ವೆಂಟಿಲೇಟರ್ಗಳು ಸಿಗದೆ ಸಾವನ್ನಪ್ಪಿದ್ದಾರೆ. ಇವನ್ನು ಸಹಜ ಸಾವುಗಳು ಅನ್ನಲು ಬರುವುದಿಲ್ಲ. ಆರೋಗ್ಯ ಕೇಂದ್ರಗಳಲ್ಲಿನ ಲೋಪದೋಷಗಳಿಂದ ಈ ಸಾವುಗಳು ಸಂಭವಿಸಿರುವುದರಿಂದ ಇದು ಜೀವಿಸುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ.</p>.<p>ಆರೋಗ್ಯ ಕ್ಷೇತ್ರದ ಬಗೆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಇಂತಹ ಘಟನೆಗಳು ಸಂಭವಿಸಿದ್ದು, ಇದರ ನೇರ ಹೊಣೆಗಾರಿಕೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಹೀಗಿರುವಾಗ, ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ.<br /><br />-<strong><em>ನಾಗೇಶ್ ಹರಳಯ್ಯ, ಕಲಬುರ್ಗಿ</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>