ಲಾಕ್ಡೌನ್ ಸಮಯದಲ್ಲಿ ಊರಿನತ್ತ ಮುಖ ಮಾಡಿದ್ದ ಶ್ರಮಿಕ ವರ್ಗ, ಅನ್ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಪುನಃ ಬದುಕು ಕಟ್ಟಿಕೊಳ್ಳಲು ಬೆಂಗಳೂರಿನತ್ತ ಮರುವಲಸೆ ಆರಂಭಿಸಿತು. ಅಂತೆಯೇ ದೇಶದಾದ್ಯಂತ ಸುಮಾರು 200 ರೈಲುಗಳು ವಿಶೇಷ ರೈಲಿನ ಹೆಸರಿನಲ್ಲಿ ಆರಂಭಗೊಂಡವು. ಆದರೆ, ಅದೇಕೊ ಕಲ್ಯಾಣ ಕರ್ನಾಟಕದ ಮುಖೇನ ಹಾದು ಹೋಗುವ ಸೊಲ್ಲಾಪುರ- ಹಾಸನ ಮತ್ತು ಬಾಗಲಕೋಟೆ- ಮೈಸೂರು ನಡುವಿನ ರೈಲು ಸೇವೆ ಆರಂಭಗೊಳ್ಳಲಿಲ್ಲ. ಈ ಎರಡು ರೈಲುಗಳ ಮುಖಾಂತರವೇ ಹೆಚ್ಚಿನ ಶ್ರಮಿಕರು ಬೆಂಗಳೂರು ತಲುಪುತ್ತಾರೆ. ರಾಜ್ಯದವರೇ ಆದ ಕೇಂದ್ರದ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿಯವರಿಗೆ ಹಲವಾರು ಟ್ವೀಟ್ಗಳ ಮೂಲಕ ಗಮನ ಸೆಳೆದರೂ ಪ್ರಯೋಜನವಾಗಿಲ್ಲ.