<p>‘ಆಸ್ಪತ್ರೆಗಳ ಭಾರ ತಗ್ಗಿಸಲು ಬಿಎಂಸಿ- 92 ವೈದ್ಯಪಡೆಯ ಹೊಸ ಮಾರ್ಗ’ ಎಂಬ ಸುದ್ದಿ (ಪ್ರ.ವಾ., ಮೇ 15) ಓದಿ ಸಂತಸವಾಯಿತು. ಕೋವಿಡ್ ಸಾಂಕ್ರಾಮಿಕದ ಈ ದುರಿತ ಕಾಲದಲ್ಲಿ ಆಸ್ಪತ್ರೆ, ಹಾಸಿಗೆ, ಆಮ್ಲಜನಕ, ಲಸಿಕೆ ವಿಚಾರವಾಗಿ ಸರ್ಕಾರವೇ ಗೊಂದಲದಲ್ಲಿರುವಾಗ, ಬೆಂಗಳೂರು ವೈದ್ಯಕೀಯ ಕಾಲೇಜಿನ (ಬಿಎಂಸಿ) 1992ರ ಬ್ಯಾಚ್ನ ಪದವೀಧರರ ಗುಂಪು ಕೊರೊನಾ ಸೋಂಕಿತರಿಗೆ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ ಕಾರ್ಯ.</p>.<p>ಹಾಗೆಯೇ ದೇಶ ವಿದೇಶಗಳಲ್ಲಿರುವ ಈ ತಂಡದ ವೈದ್ಯರು ಈ ಕಾರ್ಯಕ್ಕೆ ಕೈ ಜೋಡಿಸಿ, ಈ ಸಂಬಂಧ ದೇಣಿಗೆಯನ್ನು ಸಂಗ್ರಹಿಸಿ ಅದನ್ನು ಕೊರೊನಾ ಸೋಂಕಿತರ ಸೇವೆಗೆ ಸದ್ಬಳಕೆ ಮಾಡಿಕೊಂಡಿರುವುದು, ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಸಹಾಯವಾಣಿಗಳನ್ನು ತೆರೆದು, ಇಂತಹ ಸಂಕಷ್ಟದ ಸಮಯದಲ್ಲಿ ಜನತೆಗೆ ನೆರವಾಗುತ್ತಿರುವುದು ನೊಂದವರಲ್ಲಿ ಹೊಸ ಭರವಸೆ ಮೂಡಿಸುತ್ತಿದೆ.</p>.<p>ಎಲ್ಲದಕ್ಕೂ ಸರ್ಕಾರವನ್ನೇ ಕಾಯದೆ ಸ್ವಯಂ ಸೇವಕರು ಸ್ವ ಇಚ್ಛೆಯಿಂದ ಮುಂದೆ ಬಂದು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾದುದು ಇಂದಿನ ಅನಿವಾರ್ಯಗಳಲ್ಲಿ ಒಂದು.</p>.<p><em><strong>- ರಾಘವೇಂದ್ರ ಅಫುರಾ,ಅಗತಗೌಡನಹಳ್ಳಿ, ಗುಂಡ್ಲುಪೇಟೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಆಸ್ಪತ್ರೆಗಳ ಭಾರ ತಗ್ಗಿಸಲು ಬಿಎಂಸಿ- 92 ವೈದ್ಯಪಡೆಯ ಹೊಸ ಮಾರ್ಗ’ ಎಂಬ ಸುದ್ದಿ (ಪ್ರ.ವಾ., ಮೇ 15) ಓದಿ ಸಂತಸವಾಯಿತು. ಕೋವಿಡ್ ಸಾಂಕ್ರಾಮಿಕದ ಈ ದುರಿತ ಕಾಲದಲ್ಲಿ ಆಸ್ಪತ್ರೆ, ಹಾಸಿಗೆ, ಆಮ್ಲಜನಕ, ಲಸಿಕೆ ವಿಚಾರವಾಗಿ ಸರ್ಕಾರವೇ ಗೊಂದಲದಲ್ಲಿರುವಾಗ, ಬೆಂಗಳೂರು ವೈದ್ಯಕೀಯ ಕಾಲೇಜಿನ (ಬಿಎಂಸಿ) 1992ರ ಬ್ಯಾಚ್ನ ಪದವೀಧರರ ಗುಂಪು ಕೊರೊನಾ ಸೋಂಕಿತರಿಗೆ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ ಕಾರ್ಯ.</p>.<p>ಹಾಗೆಯೇ ದೇಶ ವಿದೇಶಗಳಲ್ಲಿರುವ ಈ ತಂಡದ ವೈದ್ಯರು ಈ ಕಾರ್ಯಕ್ಕೆ ಕೈ ಜೋಡಿಸಿ, ಈ ಸಂಬಂಧ ದೇಣಿಗೆಯನ್ನು ಸಂಗ್ರಹಿಸಿ ಅದನ್ನು ಕೊರೊನಾ ಸೋಂಕಿತರ ಸೇವೆಗೆ ಸದ್ಬಳಕೆ ಮಾಡಿಕೊಂಡಿರುವುದು, ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಸಹಾಯವಾಣಿಗಳನ್ನು ತೆರೆದು, ಇಂತಹ ಸಂಕಷ್ಟದ ಸಮಯದಲ್ಲಿ ಜನತೆಗೆ ನೆರವಾಗುತ್ತಿರುವುದು ನೊಂದವರಲ್ಲಿ ಹೊಸ ಭರವಸೆ ಮೂಡಿಸುತ್ತಿದೆ.</p>.<p>ಎಲ್ಲದಕ್ಕೂ ಸರ್ಕಾರವನ್ನೇ ಕಾಯದೆ ಸ್ವಯಂ ಸೇವಕರು ಸ್ವ ಇಚ್ಛೆಯಿಂದ ಮುಂದೆ ಬಂದು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾದುದು ಇಂದಿನ ಅನಿವಾರ್ಯಗಳಲ್ಲಿ ಒಂದು.</p>.<p><em><strong>- ರಾಘವೇಂದ್ರ ಅಫುರಾ,ಅಗತಗೌಡನಹಳ್ಳಿ, ಗುಂಡ್ಲುಪೇಟೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>