ಕೊರೊನಾ ಮೂರನೆಯ ಅಲೆಯು ಮಕ್ಕಳನ್ನು ಕಾಡಲಿದೆ ಎಂದು ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಕ್ಕಳು ಯಾವುದೇ ಸಂದರ್ಭದಲ್ಲಿಯೂ ಪೋಷಕರನ್ನು ಬಿಟ್ಟು ಇರಲಾರರು. ಹೀಗಾಗಿ, ಚಿಕ್ಕಮಕ್ಕಳನ್ನು ಹೊಂದಿರುವ ಪೋಷಕರನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ, ಆದ್ಯತೆ ಮೇಲೆ ಅವರೆಲ್ಲರಿಗೂ ಲಸಿಕೆ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು.
-ರಾಮಪ್ರಭಾ,ಬೆ೦ಗಳೂರು