‘ಎರಡನೇ ಡೋಸ್ಗೆ ಲಸಿಕೆ ಬರಲು ಆರಂಭವಾಗಿದೆ. ಅದಕ್ಕಾಗಿ ಗಾಬರಿ ಬಿದ್ದು ರಾತ್ರಿ ವೇಳೆ ಸರದಿಯಲ್ಲಿ ನಿಂತು ಬೊಬ್ಬೆ ಹೊಡೆಯುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ (ಪ್ರ.ವಾ., ಮೇ 12). ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗಿದೆ. ಹೀಗಾಗಿ ಜನ ರಾತ್ರಿ ವೇಳೆ ಹೊರ ಹೋಗಲು ಸಾಧ್ಯವೇ? ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಹೀಗಾಗಿ ಯಾರೂ ರಾತ್ರಿ ವೇಳೆ ಆಸ್ಪತ್ರೆಗಳಿಗೆ ಬಂದು ಬೊಬ್ಬೆ ಹಾಕುತ್ತಿಲ್ಲ. ಆದರೆ ಲಸಿಕೆ ಪಡೆಯುವ ಸಲುವಾಗಿ ಬೆಳಿಗ್ಗೆ ಬೇಗ ಆಸ್ಪತ್ರೆಗೆ ಓಡುತ್ತಿದ್ದಾರೆ ಅಷ್ಟೆ.