ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಕೆಗಾಗಿ ಟೀಕೆ ಸರಿಯಲ್ಲ

Last Updated 28 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ಹೊಸ ರೂಪಾಂತರದ ಕೊರೊನಾ ಪಸರಿಸಬಹುದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ರಾತ್ರಿ ಕರ್ಫ್ಯೂ ಜಾರಿ ಮಾಡಿತು. ಈ ನಡೆಯನ್ನು ಸಾಮಾನ್ಯ ಜನರು, ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ಕೆಲವರು ಕಟುವಾಗಿ ಟೀಕಿಸಿದರು. ಮಾಜಿ ಸಚಿವರೊಬ್ಬರು ‘ರಾತ್ರಿ ವೇಳೆ ಮಾತ್ರ ಎಚ್ಚರವಿರಲು ಕೊರೊನಾ ಏನು ಗೂಬೆನಾ’ ಎಂದರು. ಇವರೆಲ್ಲರ ಅಭಿಪ್ರಾಯ ಸರಿಯಿರಬಹುದು. ಸಾರ್ವಜನಿಕ ಅಭಿಪ್ರಾಯವನ್ನು ಮನ್ನಿಸಿ ತನ್ನ ನಿರ್ಧಾರವನ್ನು ಸರ್ಕಾರ ವಾಪಸ್‌ ಪಡೆಯಿತು. ಆದರೆ ಇದನ್ನು ಕೂಡ ಜನ ವಿರೋಧಿಸಿದರು. ಸರ್ಕಾರದ ಪ್ರತಿಯೊಂದು ನಿರ್ಧಾರದಲ್ಲೂ ಹೀಗೆ ತಪ್ಪುಗಳನ್ನು ಹುಡುಕುತ್ತಾ ಹೋದರೆ ಅದಕ್ಕೆ ಕೊನೆ ಮೊದಲು ಎಂಬುದೇ ಇರುವುದಿಲ್ಲ. ಟೀಕಿಸುವ ಸಲುವಾಗಿ ಟೀಕೆ ಎಂಬಂತಾಗದೆ, ಪ್ರಜ್ಞಾವಂತರಾಗಿ ವರ್ತಿಸಬೇಕಾದುದು ಜನಸಾಮಾನ್ಯರ ಕರ್ತವ್ಯ.

-ಡಾ. ಬಿ.ಆರ್.ಮಂಜುನಾಥ ಬೆಂಡರವಾಡಿ, ಗುಂಡ್ಲುಪೇಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT