ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ತನಿಖೆಯಾಗಲಿ

Last Updated 21 ಅಕ್ಟೋಬರ್ 2019, 1:49 IST
ಅಕ್ಷರ ಗಾತ್ರ

ಪರಿಶಿಷ್ಟ ಜಾತಿಯ ವಿಧವೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ, ಅವರ ಜೀವನಮಟ್ಟ ಸುಧಾರಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರವು ವಿಧವಾ ವಿವಾಹ ನೆರವು ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಮಾಹಿತಿ ಕೊರತೆಯಿಂದಾಗಿ ಹೆಚ್ಚಿನ ಮಂದಿ ಈ ಸೌಲಭ್ಯ ಪಡೆದುಕೊಳ್ಳದಿರುವ ನೋವು ಒಂದೆಡೆಯಾದರೆ, ದಮನಿತರ ಪರವಾದ ಇಂತಹ ಯೋಜನೆಗಳು ದುರ್ಬಳಕೆಯಾಗುತ್ತಿರುವ ವರದಿ (ಪ್ರ.ವಾ., ಒಳನೋಟ, ಅ. 20) ನೋಡಿ ಮತ್ತಷ್ಟು ಆಘಾತವಾಯಿತು.

ದಲಿತರ ಉದ್ಧಾರಕ್ಕಾಗಿ ಜಾರಿಗೆ ಬಂದ ಮಹತ್ವಾಕಾಂಕ್ಷಿ ಯೋಜನೆಯನ್ನು ದಲಿತರೇ ಅಧಿಕಾರಿಗಳೊಟ್ಟಿಗೆ ಸೇರಿ ಹಳ್ಳ ಹಿಡಿಸಿದ್ದು ಬೇಸರದ ಸಂಗತಿ. ಹಣಕ್ಕಾಗಿ ಜನ ಯಾವ ಮಟ್ಟಕ್ಕಾದರೂ ಇಳಿಯಬಲ್ಲರು ಎಂಬುದಕ್ಕೆ ಈ ವಿದ್ಯಮಾನ ನಿದರ್ಶನ. ಜಾರಿಯಾದ ಯೋಜನೆಗಳು ಎಷ್ಟು ಪಾರದರ್ಶಕವಾಗಿ ಜನರನ್ನು ತಲುಪುತ್ತಿವೆ ಎಂಬ ಬಗ್ಗೆ ಗಮನಹರಿಸಬೇಕಾದುದು ಸರ್ಕಾರದ ಕರ್ತವ್ಯ.

- ನಾಗರಾಜ್ ಗರಗ್,ಹೊಸದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT