ಪರಿಶಿಷ್ಟ ಜಾತಿಯ ವಿಧವೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ, ಅವರ ಜೀವನಮಟ್ಟ ಸುಧಾರಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರವು ವಿಧವಾ ವಿವಾಹ ನೆರವು ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಮಾಹಿತಿ ಕೊರತೆಯಿಂದಾಗಿ ಹೆಚ್ಚಿನ ಮಂದಿ ಈ ಸೌಲಭ್ಯ ಪಡೆದುಕೊಳ್ಳದಿರುವ ನೋವು ಒಂದೆಡೆಯಾದರೆ, ದಮನಿತರ ಪರವಾದ ಇಂತಹ ಯೋಜನೆಗಳು ದುರ್ಬಳಕೆಯಾಗುತ್ತಿರುವ ವರದಿ (ಪ್ರ.ವಾ., ಒಳನೋಟ, ಅ. 20) ನೋಡಿ ಮತ್ತಷ್ಟು ಆಘಾತವಾಯಿತು.