ಇದಿಷ್ಟೇ ಸಾಲದೆಂಬಂತೆ ಮತ್ತೆ ಪಶ್ಚಿಮಘಟ್ಟದ ಒಡಲೊಳಗೆ 1,400 ಚಿಕ್ಕ ಚಿಕ್ಕ ಡ್ಯಾಂಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಅದಕ್ಕೆ ನೆರವು ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿ, ಪ್ರಸ್ತಾವ ಸಲ್ಲಿಸಲಾಗಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವರು ಹೇಳಿರುವುದು ವರದಿಯಾಗಿದೆ. ಅರಣ್ಯದಲ್ಲಿ ನಡೆಯುವ ಇಂತಹ ಯೋಜನೆಗಳಿಂದ ಶಾಶ್ವತ ಹಾನಿಗೀಡಾಗುವ ಒಟ್ಟು ಪರಿಸರ, ಅರಣ್ಯ, ಜನಜೀವನವನ್ನು ಕುರಿತು ಮೊದಲು ಸರ್ಕಾರವು ವಿಜ್ಞಾನಿಗಳು, ತಜ್ಞರೊಂದಿಗೆ ಚರ್ಚೆ ಮಾಡಲಿ. ಈಗಾಗಲೇ ಪ್ರಕೃತಿಯ ಮೇಲಿನ ಅವ್ಯಾಹತ ಪ್ರಹಾರದಿಂದ ಅವನತಿಯ ಹಾದಿ ಹಿಡಿದಿರುವ ಮನುಕುಲ, ವಿವೇಚನೆ ಇಲ್ಲದೇ ಇಂತಹ ಮತ್ತಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸದಿರಲಿ.