ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ: ಬೇಕಿದೆ ಅವಕಾಶ

Last Updated 26 ಸೆಪ್ಟೆಂಬರ್ 2019, 20:07 IST
ಅಕ್ಷರ ಗಾತ್ರ

ಮೈಸೂರಿನ ದಸರಾ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದೆ. ನಾಡಿನ ಪರಂಪರೆ, ಕಲೆ, ಸಾಂಸ್ಕೃತಿಕ ವೈಭವವು ಒಂಬತ್ತು ದಿನಗಳ ಕಾಲ ಅನಾವರಣಗೊಳ್ಳುತ್ತದೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಭಾಗಗಳಡಿ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಆದರೆ, ಈ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರದ ಕೊರತೆ ಎದ್ದು ಕಾಣುತ್ತದೆ. ಉತ್ತರ ಕರ್ನಾಟಕದ ಬಹುತೇಕ ಪ್ರತಿಭೆಗಳಿಗೆ ಪಾಲ್ಗೊಳ್ಳಲು ಅವಕಾಶವೇ ಸಿಗುವುದಿಲ್ಲ.

ಉತ್ಸವ ಸಮಿತಿಯ ಅಧಿಕೃತ ಜಾಲತಾಣದಲ್ಲೂ ಮುಂಚಿತವಾಗಿ ಪ್ರಕಟಣೆ ಮಾಡುವುದಿಲ್ಲ.‌ ಟಾರ್ಚ್‌ ಪೆರೇಡ್‌ನಂತಹ ಸುಂದರ ಕಾರ್ಯಕ್ರಮಕ್ಕೆ ಟಿಕೆಟ್ ಪಡೆದುಕೊಳ್ಳುವುದು ದೊಡ್ಡ ಸಾಹಸವೇ ಸರಿ. ಮೈಸೂರು ಭಾಗದ ರಾಜಕಾರಣಿಗಳು, ಉನ್ನತ ಸ್ಥಾನದಲ್ಲಿ ಇರುವವರು ಮೊದಲೇ ಲಾಬಿ ಮಾಡಿ ಎಲ್ಲ ಟಿಕೆಟ್‌ಗಳನ್ನೂ ಬುಕ್ ಮಾಡಿಕೊಂಡಿರುತ್ತಾರೆ. ಈ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಆಯೋಜಿಸುವುದರಿಂದ ಪ್ರತಿಭೆಗಳಿಗೆ ಪ್ರೋತ್ಸಾಹ, ವೇದಿಕೆ ದೊರಕಬೇಕು.

–ಪ್ರಹ್ಲಾದ್ ವಾ. ಪತ್ತಾರ,ಯಡ್ರಾಮಿ, ಕಲಬುರ್ಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT