ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ನಿಂದನೆ, ಮಾನಹಾನಿಕರ ಹೇಳಿಕೆ, ಆಕ್ಷೇಪಾರ್ಹ ಕಮೆಂಟ್ ಪ್ರಕಟಿಸುವುದು, ಪ್ರಚುರಪಡಿಸುವುದನ್ನು ತಡೆಯಲು ಕೇರಳ ಸರ್ಕಾರವು ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು, ಇದು ವಾಕ್ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ಎಂದು ವಿರೋಧ ವ್ಯಕ್ತವಾದದ್ದರಿಂದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬೆಳವಣಿಗೆಯು ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತ ಚರ್ಚೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.