ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶಾಸಕ ಮುನಿರತ್ನ ಅವರ ಗೆಲುವನ್ನು ಅನೂರ್ಜಿತ ಎಂದು ಘೋಷಿಸಬೇಕು ಎಂಬ ತಕರಾರು ಅರ್ಜಿಯನ್ನು ಹೈಕೋರ್ಟ್ ಇದೀಗ ಕೈಗೆತ್ತಿಕೊಂಡಿದೆ ಎಂದು ವರದಿಯಾಗಿದೆ. ಆ ಚುನಾವಣೆ ನಂತರ ಮುನಿರತ್ನ ಅವರು ಅಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಪಕ್ಷ ಸೇರಿ, ಉಪಚುನಾವಣೆ ಸಹ ನಡೆದು, ಅದರಲ್ಲೂ ಗೆದ್ದು ಈಗ ಶಾಸಕರಾಗಿದ್ದಾರೆ, ಸಚಿವರಾಗಿದ್ದಾರೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳಿಂದ ತ್ವರಿತಗತಿಯಲ್ಲಿ ತೀರ್ಪು ಬಂದರೆ ಒಳ್ಳೆಯದು ಮತ್ತು ಅದು ಅಪೇಕ್ಷಿತ ಕೂಡಾ.