ಒಂದು ಸ್ವಸ್ಥ ಸಮಾಜ, ಸ್ವಸ್ಥ ಪರಿಸರ ನಿರ್ಮಾಣದಲ್ಲಿ ಕಲಾವಿದರು- ಕಲೆ, ಸಾಹಿತಿಗಳು- ಸಾಹಿತ್ಯ ಪ್ರಮುಖವಾದ ಪಾತ್ರವನ್ನು ವಹಿಸುತ್ತಾ ಬಂದಿವೆ. ಸ್ವಾತಂತ್ರ್ಯ ಹೋರಾಟವೂ ಸೇರಿದಂತೆ ಇದುವರೆಗಿನ ಯಾವುದೇ ಹೋರಾಟಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು, ಸಮಾಜದ ಹಿತಕ್ಕೆ ಪೂರಕವಾಗಿ ಕೆಲಸ ಮಾಡುವವರು ಕಲಾವಿದರು, ಸಾಹಿತಿಗಳು. ಸದಾ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುವ ರಂಗಭೂಮಿ ಎಲ್ಲ ಕಾಲಕ್ಕೂ ಪ್ರತಿಭಟನೆಯ ಅಸ್ತ್ರವಾಗಿದೆ.