ಮತ್ತೊಂದು ಪಕ್ಷದಿಂದ ಕಾಂಗ್ರೆಸ್ಗೆ ಬಂದು, ಪಕ್ಷವನ್ನು ಮುನ್ನಡೆಸಿ, ಮುಖ್ಯಮಂತ್ರಿಯಾಗಿ ಅವಧಿ ಪೂರೈಸಿ, ಈಗ ಮಾಜಿ ಎನಿಸಿಕೊಂಡ
ವರನ್ನು ಇನ್ನೂ ವಲಸೆ ಬಂದವರು ಎಂದು ಹೇಳುವುದರಲ್ಲಿ ಯಾವ ಅರ್ಥವೂ ಇಲ್ಲ. ತಾವು ಮೂಲ ಕಾಂಗ್ರೆಸ್ಸಿಗರು ಎಂದು ಹೇಳಿಕೊಳ್ಳುವವರು ನಿಜಕ್ಕೂ ಪಕ್ಷದ ನಿಷ್ಠಾವಂತರಾಗಿದ್ದರೆ, ಇತ್ತೀಚೆಗೆ ನಡೆದ ವಿಧಾನಸಭಾಉಪಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳದೆ ಇರುತ್ತಿರಲಿಲ್ಲ. ಹೆಗಲಿಗೆ ಹೆಗಲು ಕೊಟ್ಟು ಪಕ್ಷವನ್ನು ಸಂಘಟಿಸುತ್ತಿದ್ದರೇ ಹೊರತು ‘ಕೈ’ ಕೊಡುತ್ತಿರಲಿಲ್ಲ. ಈಗಲಾದರೂ ಒಣಪ್ರತಿಷ್ಠೆಯನ್ನು ಬಿಟ್ಟು ಒಂದಾಗಿ, ಪಕ್ಷ ಸಂಘಟನೆಯಲ್ಲಿ ಅವರೆಲ್ಲ ಕಾರ್ಯಕರ್ತರ ‘ಕೈ’ ಹಿಡಿಯಲಿ.