ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇತ್ತೀಚೆಗೆ ಕೆರೆಗಳ ಹೂಳೆತ್ತಲು ಮುಂದಾಗುತ್ತಿರುವುದು ಸ್ವಾಗತಾರ್ಹ ಕ್ರಮ. ಕೆರೆಗಳು ಬೇಸಿಗೆಯಲ್ಲಿ ಬತ್ತಿ ಹೋಗಿ ಪಶು-ಪಕ್ಷಿಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವುದು ಸರ್ವೇ ಸಾಮಾನ್ಯ. ಬೇಸಿಗೆಯಲ್ಲಿ ಬತ್ತಿ ಹೋಗುವುದನ್ನು ತಪ್ಪಿಸಲು ಕೆರೆ ತುಂಬಿಸುವ ಯೋಜನೆ ತುಂಬಾ ಅನುಕೂಲಕರವಾಗಿದೆ. ಇದರಿಂದ ಕೆರೆಯ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಿದಂತಾಗುತ್ತದೆ. ಬೋರ್ವೆಲ್ಗಳ ಮರುಪೂರಣ ಆಗುತ್ತದೆ. ಪಶು-ಪಕ್ಷಿಗಳ ದಾಹ ತಣಿಸಬಹುದು. ಗಿಡ-ಮರಗಳು ಬೆಳೆದು ಹಚ್ಚ ಹಸಿರಿನ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಮೀನುಗಾರಿಕೆಗೂ ಸಹಕಾರಿ.