‘ಡಿಜಿಟಲ್ ಚುನಾವಣೆ’ಗೆ ಸಕಾಲ ಎಂಬ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಲೇಖನ (ಸಂಗತ, ಅ. 8) ಉತ್ತಮ ಚಿಂತನೆಗಳಿಂದ ಕೂಡಿದೆ. ಕಟ್ಟುನಿಟ್ಟಿನ ಕಾನೂನುಗಳು ಜಾರಿಯಲ್ಲಿದ್ದರೂ ಚುನಾವಣಾ ಅಕ್ರಮಗಳಿಗೆ ಕಡಿವಾಣ ಬೀಳುತ್ತಿಲ್ಲ. ಚುನಾವಣೆಯಿಂದ ಚುನಾವಣೆಗೆ ನಾನಾ ರೀತಿಯಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರಸ್ತುತ ಡಿಜಿಟಲ್ ಯುಗದಲ್ಲಿಯಾದರೂ ಪಾರದರ್ಶಕವಾಗಿ ಚುನಾವಣೆ ನಡೆಯಬೇಕಾಗಿದೆ. ಅಭ್ಯರ್ಥಿಗಳು ಚುನಾವಣೆ ಸಮಯದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡದೇ ಇದ್ದರೆ ನಂತರ ‘ಗಳಿಕೆ’ ಕಡೆ ಅವರ ಗಮನ ಕಡಿಮೆಯಾಗಬಹುದೇನೊ?!