ವಾಚಕರ ವಾಣಿ: ಶಾಲೆಯ ಹಿರಿಮೆ ಹೆಚ್ಚಿಸಿದ ನಡೆ
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ದೇವಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕೃಷಿಯನ್ನು ಒಂದು ಪಠ್ಯವಾಗಿ ಸ್ವೀಕರಿಸಿ ಮಾದರಿಯಾಗಿರುವುದು (ಪ್ರ.ವಾ., ಡಿ. 1) ಅತ್ಯಂತ ಶ್ಲಾಘನೀಯ. ಕೊರೊನಾ ಕಾರಣದಿಂದ ಎಂಟು ತಿಂಗಳಿಂದ ಶಾಲಾ ಕಾಲೇಜು ಬಂದ್ ಆಗಿವೆ. ಈ ನಡುವೆ ಎಷ್ಟೋ ಶಿಕ್ಷಕರು ಮಕ್ಕಳಿದ್ದಲ್ಲಿಗೇ ಹೋಗಿ ಪಾಠ ಮಾಡಿ ವೃತ್ತಿಧರ್ಮವನ್ನು ಪಾಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದೇ ರೀತಿ, ದೇವಗಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊರೊನಾ ರಜಾ ದಿನಗಳಲ್ಲಿ ಶಾಲಾ ಆವರಣದ 20 ಗುಂಟೆ ಜಮೀನಿನಲ್ಲಿ ಭತ್ತ, ರಾಗಿ ಮತ್ತು ಸಾವಯವ ತರಕಾರಿಗಳನ್ನು ಬೆಳೆಯುವುದರ ಮೂಲಕ ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ಸರ್ಕಾರಿ ಶಾಲೆಗಳ ಅಳಿವು ಉಳಿವಿನ ಹೋರಾಟದ ಈ ದಿನಗಳಲ್ಲಿ ವಿದ್ಯಾರ್ಥಿಗಳ ಕೃಷಿ ಪೋಷಣೆಯ ಚಟುವಟಿಕೆ ವಿಭಿನ್ನವಾಗಿದೆ. ಉಳಿದ ಶಾಲೆಗಳೂ ಇಂತಹ ಮಾದರಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಶಾಲಾ ಆವರಣ ಮತ್ತು ಶಾಲೆಯಲ್ಲಿರುವ ನೀರಿನ ಸದ್ಬಳಕೆ ಬಗ್ಗೆ ಅರಿವು ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಕೃಷಿ ಜ್ಞಾನಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು.
ಮಾರುತೇಶ್ ಕವಿ ಪುಲಮಘಟ್ಟ, ಮಧುಗಿರಿ
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.