<p>ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ದೇವಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕೃಷಿಯನ್ನು ಒಂದು ಪಠ್ಯವಾಗಿ ಸ್ವೀಕರಿಸಿ ಮಾದರಿಯಾಗಿರುವುದು (ಪ್ರ.ವಾ., ಡಿ. 1) ಅತ್ಯಂತ ಶ್ಲಾಘನೀಯ. ಕೊರೊನಾ ಕಾರಣದಿಂದ ಎಂಟು ತಿಂಗಳಿಂದ ಶಾಲಾ ಕಾಲೇಜು ಬಂದ್ ಆಗಿವೆ. ಈ ನಡುವೆ ಎಷ್ಟೋ ಶಿಕ್ಷಕರು ಮಕ್ಕಳಿದ್ದಲ್ಲಿಗೇ ಹೋಗಿ ಪಾಠ ಮಾಡಿ ವೃತ್ತಿಧರ್ಮವನ್ನು ಪಾಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದೇ ರೀತಿ, ದೇವಗಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊರೊನಾ ರಜಾ ದಿನಗಳಲ್ಲಿ ಶಾಲಾ ಆವರಣದ 20 ಗುಂಟೆ ಜಮೀನಿನಲ್ಲಿ ಭತ್ತ, ರಾಗಿ ಮತ್ತು ಸಾವಯವ ತರಕಾರಿಗಳನ್ನು ಬೆಳೆಯುವುದರ ಮೂಲಕ ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.</p>.<p>ಸರ್ಕಾರಿ ಶಾಲೆಗಳ ಅಳಿವು ಉಳಿವಿನ ಹೋರಾಟದ ಈ ದಿನಗಳಲ್ಲಿ ವಿದ್ಯಾರ್ಥಿಗಳ ಕೃಷಿ ಪೋಷಣೆಯ ಚಟುವಟಿಕೆ ವಿಭಿನ್ನವಾಗಿದೆ. ಉಳಿದ ಶಾಲೆಗಳೂ ಇಂತಹ ಮಾದರಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಶಾಲಾ ಆವರಣ ಮತ್ತು ಶಾಲೆಯಲ್ಲಿರುವ ನೀರಿನ ಸದ್ಬಳಕೆ ಬಗ್ಗೆ ಅರಿವು ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಕೃಷಿ ಜ್ಞಾನಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು.</p>.<p>ಮಾರುತೇಶ್ ಕವಿ ಪುಲಮಘಟ್ಟ, ಮಧುಗಿರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ದೇವಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕೃಷಿಯನ್ನು ಒಂದು ಪಠ್ಯವಾಗಿ ಸ್ವೀಕರಿಸಿ ಮಾದರಿಯಾಗಿರುವುದು (ಪ್ರ.ವಾ., ಡಿ. 1) ಅತ್ಯಂತ ಶ್ಲಾಘನೀಯ. ಕೊರೊನಾ ಕಾರಣದಿಂದ ಎಂಟು ತಿಂಗಳಿಂದ ಶಾಲಾ ಕಾಲೇಜು ಬಂದ್ ಆಗಿವೆ. ಈ ನಡುವೆ ಎಷ್ಟೋ ಶಿಕ್ಷಕರು ಮಕ್ಕಳಿದ್ದಲ್ಲಿಗೇ ಹೋಗಿ ಪಾಠ ಮಾಡಿ ವೃತ್ತಿಧರ್ಮವನ್ನು ಪಾಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದೇ ರೀತಿ, ದೇವಗಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊರೊನಾ ರಜಾ ದಿನಗಳಲ್ಲಿ ಶಾಲಾ ಆವರಣದ 20 ಗುಂಟೆ ಜಮೀನಿನಲ್ಲಿ ಭತ್ತ, ರಾಗಿ ಮತ್ತು ಸಾವಯವ ತರಕಾರಿಗಳನ್ನು ಬೆಳೆಯುವುದರ ಮೂಲಕ ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.</p>.<p>ಸರ್ಕಾರಿ ಶಾಲೆಗಳ ಅಳಿವು ಉಳಿವಿನ ಹೋರಾಟದ ಈ ದಿನಗಳಲ್ಲಿ ವಿದ್ಯಾರ್ಥಿಗಳ ಕೃಷಿ ಪೋಷಣೆಯ ಚಟುವಟಿಕೆ ವಿಭಿನ್ನವಾಗಿದೆ. ಉಳಿದ ಶಾಲೆಗಳೂ ಇಂತಹ ಮಾದರಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಶಾಲಾ ಆವರಣ ಮತ್ತು ಶಾಲೆಯಲ್ಲಿರುವ ನೀರಿನ ಸದ್ಬಳಕೆ ಬಗ್ಗೆ ಅರಿವು ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಕೃಷಿ ಜ್ಞಾನಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು.</p>.<p>ಮಾರುತೇಶ್ ಕವಿ ಪುಲಮಘಟ್ಟ, ಮಧುಗಿರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>