ಹೈದರಾಬಾದ್ನಲ್ಲಿ ಪಶುವೈದ್ಯೆಯೊಬ್ಬರ ಮೇಲೆ ನಡೆದ ಘೋರ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮಾನವ ಕುಲಕ್ಕೆ ಕಳಂಕ ತರುವಂತಹದ್ದು. ಈ ಘಟನೆಯ ಬೆನ್ನಲ್ಲೇ, ಅತ್ಯಾಚಾರಿಗೆ 21 ದಿನದಲ್ಲಿ ಮರಣದಂಡನೆ ವಿಧಿಸಲು ಅವಕಾಶ ಕಲ್ಪಿಸುವ ‘ದಿಶಾ ಮಸೂದೆ’ಯನ್ನು ಜಾರಿಗೆ ತರಲು ಆಂಧ್ರ ಪ್ರದೇಶ ಸರ್ಕಾರ ಮುಂದಾಗಿರುವುದು ಅತ್ಯಾಚಾರಿಗಳ ಮೇಲೆ ಬ್ರಹ್ಮಾಸ್ತ್ರದಂತೆ ಪರಿಣಾಮ ಬೀರುವ ನಿರೀಕ್ಷೆ ಇದೆ.