ಸಂವಿಧಾನಬದ್ಧವಾಗಿ ಜನ ತಮಗೆ ನೀಡಿದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮುಂಬೈ ರೆಸಾರ್ಟಿಗೆ ಹೋಗಿ ಕುಳಿತಿರುವ ಶಾಸಕರದು, ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ನಡೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ, ಸಂವಿಧಾನದ ಉಳಿವಿಗಾಗಿ ಈ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ನಡೆ ಅಭಿನಂದನೀಯ.