<p>ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂವರ್ಧನೆಗಾಗಿ ಶ್ರಮಿಸುತ್ತಿರುವ ಬಿ.ಎಂ.ಶ್ರೀ. ಪ್ರತಿಷ್ಠಾನ, ಉದಯಭಾನು ಕಲಾಸಂಘ, ಕನ್ನಡ ಯುವಜನ ಸಂಘ ಮೊದಲಾದ ಅನೇಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹಲವು ವರ್ಷಗಳಿಂದಲೂ ಉದಾರವಾದ ಧನಸಹಾಯ ನೀಡುತ್ತಿತ್ತು. ಈ ಹಿಂದಿನ ಸರ್ಕಾರ ಅದರಲ್ಲಿ ಅರ್ಧಕ್ಕರ್ಧ ಕಡಿತಗೊಳಿಸಿ, ಅಧಿಕಾರ ಕೊನೆಗೊಳ್ಳುವ ಮುನ್ನ ತೀರಾ ಕೊನೆಗೆ, ಅದೂ ತೀರಾ ಒತ್ತಾಯ ಮಾಡಿದ ಮೇಲೆ ಧನಸಹಾಯ ಬಿಡುಗಡೆ ಮಾಡಿತು. ಆದರೆ ಈಗ ಸುಮಾರು ಎರಡು ವರ್ಷಗಳಿಂದ ಇಂಥ ಧನಸಹಾಯ ಸರ್ಕಾರದ ಕಡೆಯಿಂದ ಬರುವುದು ನಿಂತೇ ಹೋಗಿದೆ.</p>.<p>ಕೋವಿಡ್ ಪರಿಣಾಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಈಗ್ಗೆ ಆರು ತಿಂಗಳಿನಿಂದ ಆ ಬಗ್ಗೆ ಸಂಘ ಸಂಸ್ಥೆಗಳು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈ ನಡುವೆಯೂ ಹೆಚ್ಚು ಖರ್ಚಿಲ್ಲದೆ ವಾಟ್ಸ್ಆ್ಯಪ್, ಫೇಸ್ಬುಕ್, ವೆಬಿನಾರ್ಗಳ ಮೂಲಕ ಕೆಲವು ಕಾರ್ಯಕ್ರಮಗಳನ್ನು ನಡೆಸುತ್ತ ಅಸ್ತಿತ್ವ ಉಳಿಸಿಕೊಂಡಿವೆ. ಸರ್ಕಾರ ಮೊದಲಿನಂತೆ ಧನಸಹಾಯ ನೀಡಿದರೆ ಮಾತ್ರ ಉತ್ಕೃಷ್ಟವಾದ ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಸಾಧ್ಯ.</p>.<p><strong>ಡಾ. ಆರ್.ಲಕ್ಷ್ಮೀನಾರಾಯಣ, ನರಸಿಂಹ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂವರ್ಧನೆಗಾಗಿ ಶ್ರಮಿಸುತ್ತಿರುವ ಬಿ.ಎಂ.ಶ್ರೀ. ಪ್ರತಿಷ್ಠಾನ, ಉದಯಭಾನು ಕಲಾಸಂಘ, ಕನ್ನಡ ಯುವಜನ ಸಂಘ ಮೊದಲಾದ ಅನೇಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹಲವು ವರ್ಷಗಳಿಂದಲೂ ಉದಾರವಾದ ಧನಸಹಾಯ ನೀಡುತ್ತಿತ್ತು. ಈ ಹಿಂದಿನ ಸರ್ಕಾರ ಅದರಲ್ಲಿ ಅರ್ಧಕ್ಕರ್ಧ ಕಡಿತಗೊಳಿಸಿ, ಅಧಿಕಾರ ಕೊನೆಗೊಳ್ಳುವ ಮುನ್ನ ತೀರಾ ಕೊನೆಗೆ, ಅದೂ ತೀರಾ ಒತ್ತಾಯ ಮಾಡಿದ ಮೇಲೆ ಧನಸಹಾಯ ಬಿಡುಗಡೆ ಮಾಡಿತು. ಆದರೆ ಈಗ ಸುಮಾರು ಎರಡು ವರ್ಷಗಳಿಂದ ಇಂಥ ಧನಸಹಾಯ ಸರ್ಕಾರದ ಕಡೆಯಿಂದ ಬರುವುದು ನಿಂತೇ ಹೋಗಿದೆ.</p>.<p>ಕೋವಿಡ್ ಪರಿಣಾಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಈಗ್ಗೆ ಆರು ತಿಂಗಳಿನಿಂದ ಆ ಬಗ್ಗೆ ಸಂಘ ಸಂಸ್ಥೆಗಳು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈ ನಡುವೆಯೂ ಹೆಚ್ಚು ಖರ್ಚಿಲ್ಲದೆ ವಾಟ್ಸ್ಆ್ಯಪ್, ಫೇಸ್ಬುಕ್, ವೆಬಿನಾರ್ಗಳ ಮೂಲಕ ಕೆಲವು ಕಾರ್ಯಕ್ರಮಗಳನ್ನು ನಡೆಸುತ್ತ ಅಸ್ತಿತ್ವ ಉಳಿಸಿಕೊಂಡಿವೆ. ಸರ್ಕಾರ ಮೊದಲಿನಂತೆ ಧನಸಹಾಯ ನೀಡಿದರೆ ಮಾತ್ರ ಉತ್ಕೃಷ್ಟವಾದ ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಸಾಧ್ಯ.</p>.<p><strong>ಡಾ. ಆರ್.ಲಕ್ಷ್ಮೀನಾರಾಯಣ, ನರಸಿಂಹ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>