<p>ಮಾಗಿ ಕಾಲ ಶುರುವಾಗುತ್ತಿದ್ದಂತೆ ಒಣಗಿದ ಎಲೆ ಮತ್ತಿತರ ತ್ಯಾಜ್ಯವನ್ನು ಸುಟ್ಟು ಜನರು ಚಳಿ ಕಾಯಿಸಿಕೊಳ್ಳುತ್ತಾರೆ.<br />ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಈ ಪ್ರವೃತ್ತಿ ಮತ್ತಷ್ಟು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈ ರೀತಿ ತ್ಯಾಜ್ಯ ಸುಡುವುದು ನಾನಾ ರೋಗಗಳನ್ನೂ ತಂದೊಡ್ಡುತ್ತದೆ.</p>.<p>ಒಣಗಿದ ಎಲೆಗಳ ಜೊತೆಗೆ ರಟ್ಟು, ಪ್ಲಾಸ್ಟಿಕ್ನಂತಹ ವಸ್ತುಗಳನ್ನೂ ಸುಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಬೆಳ್ಳಂಬೆಳಿಗ್ಗೆ ವಾಯುವಿಹಾರಕ್ಕೆ ಹೋದವರಿಗೆ ಈ ಹೊಗೆ ಹಾಗೂ ಪ್ಲಾಸ್ಟಿಕ್ ಸುಟ್ಟ ಕಮಟು ವಾಸನೆಯ ಅನುಭವವಾಗಿರುತ್ತದೆ. ಕೆಲವು ಪೌರ ಕಾರ್ಮಿಕರು ಸಹ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬದಲು ಸುಟ್ಟು ತಮ್ಮ ಕೆಲಸ ಹಗುರ ಮಾಡಿಕೊಳ್ಳುತ್ತಾರೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿರುವಂತೆ, ತ್ಯಾಜ್ಯ ಸುಡುವುದನ್ನೂ ಕಟ್ಟುನಿಟ್ಟಾಗಿ ನಿರ್ಬಂಧಿಸಿ ಜನಸಾಮಾನ್ಯರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಸರ್ಕಾರ ಆದ್ಯತೆ ನೀಡಬೇಕು.</p>.<p><strong>–ಡಾ. ಜ್ಞಾನೇಶ್ವರ ಭೀಮರಾವ್ ಖಾಂಡ್ಕೆ,</strong>ಹುಬ್ಬಳ್ಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಿ ಕಾಲ ಶುರುವಾಗುತ್ತಿದ್ದಂತೆ ಒಣಗಿದ ಎಲೆ ಮತ್ತಿತರ ತ್ಯಾಜ್ಯವನ್ನು ಸುಟ್ಟು ಜನರು ಚಳಿ ಕಾಯಿಸಿಕೊಳ್ಳುತ್ತಾರೆ.<br />ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಈ ಪ್ರವೃತ್ತಿ ಮತ್ತಷ್ಟು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈ ರೀತಿ ತ್ಯಾಜ್ಯ ಸುಡುವುದು ನಾನಾ ರೋಗಗಳನ್ನೂ ತಂದೊಡ್ಡುತ್ತದೆ.</p>.<p>ಒಣಗಿದ ಎಲೆಗಳ ಜೊತೆಗೆ ರಟ್ಟು, ಪ್ಲಾಸ್ಟಿಕ್ನಂತಹ ವಸ್ತುಗಳನ್ನೂ ಸುಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಬೆಳ್ಳಂಬೆಳಿಗ್ಗೆ ವಾಯುವಿಹಾರಕ್ಕೆ ಹೋದವರಿಗೆ ಈ ಹೊಗೆ ಹಾಗೂ ಪ್ಲಾಸ್ಟಿಕ್ ಸುಟ್ಟ ಕಮಟು ವಾಸನೆಯ ಅನುಭವವಾಗಿರುತ್ತದೆ. ಕೆಲವು ಪೌರ ಕಾರ್ಮಿಕರು ಸಹ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬದಲು ಸುಟ್ಟು ತಮ್ಮ ಕೆಲಸ ಹಗುರ ಮಾಡಿಕೊಳ್ಳುತ್ತಾರೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿರುವಂತೆ, ತ್ಯಾಜ್ಯ ಸುಡುವುದನ್ನೂ ಕಟ್ಟುನಿಟ್ಟಾಗಿ ನಿರ್ಬಂಧಿಸಿ ಜನಸಾಮಾನ್ಯರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಸರ್ಕಾರ ಆದ್ಯತೆ ನೀಡಬೇಕು.</p>.<p><strong>–ಡಾ. ಜ್ಞಾನೇಶ್ವರ ಭೀಮರಾವ್ ಖಾಂಡ್ಕೆ,</strong>ಹುಬ್ಬಳ್ಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>