ಮಾಸ್ಕ್ ಹಾಕಿಕೊಂಡು ಬಂದ ಕಿಡಿಗೇಡಿ ಗ್ರಾಹಕರಿಬ್ಬರು ಅಂಗಡಿಯೊಂದರಲ್ಲಿ ಬೆಲೆಬಾಳುವ ವಸ್ತುಗಳನ್ನು ದೋಚಿರುವ ಪ್ರಕರಣ ಮಂಗಳೂರಿನ ಆಸುಪಾಸಿನಲ್ಲಿ ನಡೆದಿದೆ. ಕೊರೊನಾ ಬಿಕ್ಕಟ್ಟಿನ ಈ ಸನ್ನಿವೇಶವನ್ನು ಕೆಟ್ಟ ಕೆಲಸಕ್ಕಾಗಿ ಬಳಸಿಕೊಳ್ಳುವ ಇಂತಹ ಕಿಡಿಗೇಡಿಗಳ ವಿರುದ್ಧ ಎಚ್ಚರ ವಹಿಸುವುದು ಮಾತ್ರವಲ್ಲದೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಅಗತ್ಯ ಕ್ರಮಕ್ಕೆ ನೆರವಾಗಬೇಕು. ಜೀವರಕ್ಷಣೆಗಾಗಿ ಬಳಸುವ ಮಾಸ್ಕ್ ಜೀವವನ್ನೇ ಬಲಿ ತೆಗೆದುಕೊಳ್ಳದಿರಲಿ. ಮಾಸ್ಕ್ ಧರಿಸಿದರೆ ಗುರುತು ಹಿಡಿಯಲು ಸಾಧ್ಯವಾಗುವುದಿಲ್ಲ ಎಂದು ತಿಳಿದು, ಸಂದರ್ಭದ ದುರುಪಯೋಗ ಪಡೆಯುವ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗಲಿ