ಲಾಕ್ಡೌನ್ ಹೇರಿದ್ದರೂ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲದೇ ಇರುವುದನ್ನು ಜನ ಗಂಭೀರವಾಗಿ ಪರಿಗಣಿಸಬೇಕು. ಸೋಂಕು ನಿಯಂತ್ರಣಕ್ಕೆ ಪೂರಕವಾಗಿ ಸ್ಪಂದಿಸಬೇಕು. ವೈದ್ಯಕೀಯ ಸೇವೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಅಂತಹ ಆಸ್ಪತ್ರೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಮುಂದೆ ಇಂತಹ ತಪ್ಪುಗಳಾಗದಂತೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಆಗಬೇಕು. ವೈದ್ಯರು ದೇವರ ಸಮಾನ, ಆಸ್ಪತ್ರೆಯು ದೇವಮಂದಿರ ಇದ್ದಂತೆ ಎಂಬ ಭಾವನೆ ಜನಸಾಮಾನ್ಯರಲ್ಲಿದೆ. ಇದನ್ನು ಅರಿತು ನಡೆದರೆ ಇಂತಹ ನಿರ್ಲಕ್ಷ್ಯದ ಘಟನೆಗಳು ಮರುಕಳಿಸುವುದಿಲ್ಲ.