ಉತ್ತರಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಕೃತ್ಯ ಖಂಡನೀಯ. ಆದರೆ ಇಂತಹ ವಿಚಾರದಲ್ಲೂ ರಾಜಕಾರಣ ಏಕೆ? ಕಾಂಗ್ರೆಸ್, ಬಿಜೆಪಿ, ಪ್ರಾದೇಶಿಕ ಪಕ್ಷ ಯಾವುದೇ ಇರಲಿ ಅನ್ಯಾಯದ ವಿರುದ್ಧ ದನಿ ಎತ್ತುವ, ತನಿಖೆ ನಡೆಸುವಂತೆ ನೋಡಿಕೊಳ್ಳುವ ಕೆಲಸ ಮಾಡಬೇಕು. ಸಾಕ್ಷ್ಯ ನಾಶ ಮಾಡಲು ಯುವತಿಯ ಶವವನ್ನು ರಾತ್ರೋರಾತ್ರಿ ಸುಟ್ಟು ಹಾಕಿರುವುದು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಎಂಬುದರಲ್ಲಿ ಎರಡು ಮಾತಿಲ್ಲ.