ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಚಿಕ್ಕ ಆದಾಪುರ ಗ್ರಾಮದಲ್ಲಿ ‘ಡಿ.ಸಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅವರಿಗೆ ಗ್ರಾಮಸ್ಥರು ಕೆರೆಯ ನೀರನ್ನು ಕುಡಿಯಲು ಕೊಟ್ಟಾಗ ಅವರು, ‘ಇಲ್ಲ, ನಾನು ಬಿಸ್ಲೇರಿ ನೀರು ಕುಡಿದಿದ್ದೇನೆ’ ಎಂದರು. ಏಕೆಂದರೆ, ಹಳ್ಳಿಯ ಕೆರೆಯ ನೀರು ಶುದ್ಧವಾಗಿರಲಿಲ್ಲ. ಹೀಗಿರುವಾಗ ಅಲ್ಲಿ ವಾಸಿಸುವ ಜನಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಯೋಚಿಸಬೇಕು. ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಸ್ಥಳೀಯರು ಈ ಹಿಂದೆ ಬೇಡಿಕೆ ಇಟ್ಟಿದ್ದರು. ಆದರೂ ಪ್ರಯೋಜನವಾಗಿಲ್ಲ. ಇಂತಹ ಕಾರ್ಯಕ್ರಮಗಳು ದಿನದ ಸಡಗರವಾಗದೆ ಸ್ಥಳೀಯರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಪೂರಕವಾಗಿ ಇರಬೇಕು.