ರಾಜ್ಯದ ಪರಿಸರ ಪ್ರವಾಸೋದ್ಯಮಕ್ಕೆ ಹಂಚಿಕೆಯಾದ ಅನುದಾನದಲ್ಲಿ ₹ 11.90 ಕೋಟಿ ಸದ್ಬಳಕೆಯಾಗದೆ ಹಾಗೇ ಉಳಿದುಕೊಂಡಿರುವುದು ದುರ್ದೈವವೇ ಸರಿ. ಇದರಲ್ಲಿ ಸಂಬಂಧಪಟ್ಟವರ ಪೂರ್ವ ತಯಾರಿಯ ಕೊರತೆ ಎದ್ದು ಕಾಣುತ್ತದೆ. ಸಂಬಂಧಿಸಿದವರು ಇನ್ನಾದರೂ ಎಚ್ಚೆತ್ತುಕೊಳ್ಳಲಿ.
ಪ್ರವಾಸಿ ತಾಣಕ್ಕೆ ತಕ್ಕಂತೆ ಸರಿಯಾದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿ, ಅನುದಾನವನ್ನು ಪಾರದರ್ಶಕವಾಗಿ ಸದ್ಬಳಕೆ ಮಾಡಿ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿದರೆ ದೇಶವೇ ನಮ್ಮತ್ತ ತಿರುಗಿ ನೋಡುವುದರಲ್ಲಿ ಸಂಶಯವಿಲ್ಲ. ಈ ಕಾರ್ಯಕ್ಕೆ ಇಚ್ಛಾಶಕ್ತಿ ಬೇಕಷ್ಟೆ.