ಮೈಸೂರು ವಿಶ್ವವಿದ್ಯಾಲಯ ಇತ್ತೀಚೆಗೆ ಪ್ರಕಟಿಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿನ
ತೇರ್ಗಡೆಯ ಫಲಿತಾಂಶವನ್ನು ಗಮನಿಸಿದರೆ, ರಾಜ್ಯದ ಶಿಕ್ಷಣದ ಗುಣಮಟ್ಟ ಎಷ್ಟು ಕಳಪೆ ಎಂದು ಅನಿಸದೇ ಇರಲಾರದು. ಉಪನ್ಯಾಸಕರಾಗುವ ಕನಸು ಹೊತ್ತ ಎಷ್ಟೋ ಅಭ್ಯರ್ಥಿಗಳು ಅರ್ಹತಾ ಪರಿಕ್ಷೆಯಲ್ಲಿಯೇ ಮುಗ್ಗರಿಸಿದ್ದಾರೆ. ಇವರುಗಳನ್ನು ಕೆ-ಸೆಟ್ ಇಲ್ಲದೆ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಂಡಿದ್ದೇ ಆದಲ್ಲಿ ವಿದ್ಯಾರ್ಥಿಗಳು ಇವರಿಂದ ಯಾವ ರೀತಿಯ ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಬಹುದು?