ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಇದೇ 31ರೊಳಗೆ ಮುಗಿಸುವಂತೆ ಸೂಚಿಸಲಾಗಿದೆ. ಶೈಕ್ಷಣಿಕ ಮತ್ತು ಪರೀಕ್ಷಾ ದೃಷ್ಟಿಯಿಂದ ಇದು ಸರಿಯಾದ ನಿಯಮ ಹೌದು. ಆದರೆ ಇದರಿಂದ ಒಟ್ಟಾರೆಯಾಗಿ ಪ್ರವಾಸಿ ಸ್ಥಳಗಳಲ್ಲಿ ವಿಪರೀತ ಜನಸಂದಣಿ ಉಂಟಾಗಿ, ಮಕ್ಕಳು ಇನ್ನಿಲ್ಲದ ಪರಿತಾಪವನ್ನು ಅನುಭವಿಸಬೇಕಾಗುತ್ತದೆ. ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಾದ ಮೈಸೂರಿನ ಬೃಂದಾವನ, ಹಂಪಿ, ವಿಜಯಪುರ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಧರ್ಮಸ್ಥಳ, ಉಡುಪಿ, ಕೊಲ್ಲೂರು ಹೀಗೆ ಪ್ರತಿಯೊಂದು ಸ್ಥಳದಲ್ಲೂ ಜನಸಂದಣಿ ಹೆಚ್ಚಾಗಿ, ಮಕ್ಕಳಿಗೆ ಪ್ರವಾಸಿ ಸ್ಥಳಗಳ ದರ್ಶನ ಮಾಡಿಸುವುದು ಶಿಕ್ಷಕರಿಗೆ ದೊಡ್ಡ ಹೊರೆಯಾಗುತ್ತದೆ.