ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಪಾಕ್ ಪರ ಘೋಷಣೆ: ಶಿಕ್ಷೆಯಾಗಲಿ

ಅಕ್ಷರ ಗಾತ್ರ

ಈದ್ ಉಲ್ ಫಿತ್ರ್ ಹಬ್ಬದಂದು ನಂಜನಗೂಡು ತಾಲ್ಲೂಕಿನ ಕವಲಂದೆಯಲ್ಲಿ ಪ್ರಾರ್ಥನೆ ಸಲ್ಲಿಸಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಹೊರಟಿದ್ದ ದೃಶ್ಯಕ್ಕೆ ವ್ಯಕ್ತಿಯೊಬ್ಬ ಹಿನ್ನೆಲೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ಹೇಳಲಾಗಿರುವ 30 ಸೆಕೆಂಡ್‍ಗಳ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡಿದೆ. ಮೆರವಣಿಗೆಯಲ್ಲಿದ್ದ ಮುಸ್ಲಿಮರು ಈ ಘೋಷಣೆ ಕೂಗಿಲ್ಲ, ಬೇರೆ ವ್ಯಕ್ತಿಯೊಬ್ಬ ವಿಡಿಯೊಕ್ಕೆ ಧ್ವನಿ ನೀಡಿದ್ದಾನೆ ಎನ್ನಲಾಗಿದೆ.

ಇಂತಹ ಕೃತ್ಯಗಳ ಮೂಲಕ ಸಾಮಾಜಿಕ ಸಾಮರಸ್ಯಕ್ಕೆ ಕೊಳ್ಳಿ ಇಡಲು ಪ್ರಯತ್ನಿಸುವವರಿಗೆ ಶಿಕ್ಷೆ ಆಗದಿದ್ದರೆ ಇಂತಹವರು ಹುಟ್ಟಿಕೊಳ್ಳುತ್ತಲೇ ಇರುತ್ತಾರೆ. ಹುಬ್ಬಳ್ಳಿಯಲ್ಲಿ ಯುವಕನೊಬ್ಬ ಮಸೀದಿ ಮೇಲೆ ಭಗವಾಧ್ವಜ ಹಾರಿಸುವ ವಿಡಿಯೊವೊಂದನ್ನು ಸ್ಟೇಟಸ್‌ನಲ್ಲಿ ಹಾಕಿದ್ದಕ್ಕೆ ಅಲ್ಲಿ ಏನಾಯಿತು ಎಂಬುದನ್ನು ಇಡೀ ರಾಜ್ಯವೇ ನೋಡಿದೆ. ಶಾಂತಿ ಸಾಮರಸ್ಯಕ್ಕೆ ಹೆಸರಾದ ಕರ್ನಾಟಕದಲ್ಲಿ ಪದೇಪದೇ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾಗಿದೆ.

–ಡಾ. ಮಹೇಶ್ ಮೂರ್ತಿ, ತುಮಕೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT