ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ದೆಹಲಿ ವಾಯುಮಾಲಿನ್ಯ: ಇತರರಿಗೆ ಪಾಠ

Last Updated 6 ನವೆಂಬರ್ 2022, 19:30 IST
ಅಕ್ಷರ ಗಾತ್ರ

ದೆಹಲಿಯಲ್ಲಿ ಪ್ರಾಣವಾಯು ವಿಷವಾಯುವಾಗಿ ಬದಲಾಗುತ್ತಿರುವ ವಿದ್ಯಮಾನವು ಆತಂಕಕಾರಿಯಾಗಿದೆ. ದೆಹಲಿಯ ವಾಯುಮಾಲಿನ್ಯ ಮಿತಿಮೀರಿರುವುದಕ್ಕೆ ಸುತ್ತಮುತ್ತಲಿನ ಪ್ರದೇಶಗಳ ರೈತರು ಕೃಷಿ ಕೂಳೆ ಯನ್ನು ಸುಡುತ್ತಿರುವುದು ಹಾಗೂ ರಾಜಧಾನಿಯ ಸುತ್ತಲಿನ ಕಾರ್ಖಾನೆಗಳು ಹೊರಸೂಸುತ್ತಿರುವ ರಾಸಾಯನಿಕ ಯುಕ್ತ ಹೊಗೆಯೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇದರ ಜೊತೆಗೆ ದೆಹಲಿಯಲ್ಲಿ ವಾಹನಗಳ ದಟ್ಟಣೆಯೂ ಹೆಚ್ಚುತ್ತಿದೆ. ಹಾಗಾಗಿ, ವಾಯುಮಾಲಿನ್ಯ ನಿಯಂತ್ರಣಕ್ಕೆ ಹೈಡ್ರೋಜನ್ ಆಧಾರಿತ ಇಂಧನ ತಂತ್ರಜ್ಞಾನದ ಪರಿಹಾರ ಸೂತ್ರ ಕಂಡುಕೊಳ್ಳುವುದು ಅವಶ್ಯಕವಾಗಿದೆ. ಅಲ್ಲದೆ ರಾಷ್ಟ್ರ ರಾಜಧಾನಿಯ ಇಂದಿನ ಪರಿಸ್ಥಿತಿಯ ವಿಕೋಪವನ್ನು ದೇಶದ ಉಳಿದ ನಗರಗಳೂ ಅರಿತು, ತುರ್ತಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT