ಕಬ್ಬು ನುರಿಸುವ ಹಂಗಾಮು ಈಗಾಗಲೇ ಪ್ರಾರಂಭವಾಗಿದ್ದು, ಈ ವರ್ಷ ಸಹ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರ ನಡುವೆ ಸಂಘರ್ಷಗಳು ನಡೆಯುತ್ತಿವೆ. ಬೇಡಿಕೆಗಿಂತ ಉತ್ಪಾದನೆ ಹೆಚ್ಚಾಗಿರುವುದು ಹಾಗೂ ಕಬ್ಬಿನ ವಿವಿಧ ಉತ್ಪನ್ನಗಳಿಗೆ ಸ್ಥಿರವಾದ ಬೆಲೆ ಇಲ್ಲದ ಕಾರಣ ಸಕ್ಕರೆ ಉದ್ಯಮವು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದೆ. ಇದರಿಂದಾಗಿ ಕಬ್ಬು ಬೆಳೆಗಾರರಿಗೆ ಯೋಗ್ಯ ದರ ನೀಡುವಷ್ಟು ಕಾರ್ಖಾನೆಗಳೂ ಸಶಕ್ತವಾಗಿಲ್ಲ. ಹಾಗಾಗಿ ಎಥೆನಾಲ್ ಉತ್ಪಾದಿಸಿದರೆ ಸಕ್ಕರೆ ಕಾರ್ಖಾನೆಗಳ ವರಮಾನ ಹೆಚ್ಚುತ್ತದೆ.