‘ಮಕ್ಕಳಸ್ನೇಹಿ ಕಲಿಕೆಯ ಸವಾಲು’ ಕುರಿತ ಡಾ. ಎಚ್.ಬಿ.ಚಂದ್ರಶೇಖರ್ ಅವರ ಲೇಖನ (ಸಂಗತ, ಜ. 12) ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಚಿಂತನೆಗಳು ಹಾಗೂ ಔಚಿತ್ಯಪೂರ್ಣವಾದ ಅಂಶಗಳಿಂದ ಕೂಡಿದೆ. ಶಿಕ್ಷಕರು ಪಠ್ಯ ವಿಷಯಗಳಿಗೆ ಸೀಮಿತಗೊಳ್ಳದೆ ಪಠ್ಯೇತರ ಅಂಶಗಳನ್ನು ತಮ್ಮ ಬೋಧನೆಯಲ್ಲಿ ಅಳವಡಿಸಿಕೊಂಡು, ಮಕ್ಕಳ ಬುದ್ಧಿಮಟ್ಟ ಉತ್ತಮವಾದ ರೀತಿಯಲ್ಲಿ ಬೆಳವಣಿಗೆ ಆಗುವಂತೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಇದೆ.