ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಸೊರಗುತ್ತಿದೆ ಎಂಬ ವಿಷಯ ತಿಳಿದು ವ್ಯಸನವಾಯಿತು. ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸುವರ್ಣಯುಗ ಎನ್ನಲಾಗುತ್ತದೆ. ಅದರ ರಾಜಧಾನಿಯಾಗಿದ್ದ ಹಂಪಿಯಲ್ಲಿ ಸ್ಥಾಪಿತವಾದ ಕನ್ನಡ ವಿಶ್ವವಿದ್ಯಾಲಯವು ಕನ್ನಡ ಅಸ್ಮಿತೆಯ ಪ್ರತೀಕ. ಕನ್ನಡ ಹಾಗೂ ಇತಿಹಾಸಕ್ಕೆ ಸಂಬಂಧಪಟ್ಟ ಹಲವು ಮಹತ್ವದ ಕೃತಿಗಳನ್ನು ವಿಶ್ವವಿದ್ಯಾಲಯ ಹೊರತಂದಿದೆ. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿ ಅದರ ಏಳ್ಗೆಗೆ ಗಮನ ನೀಡಲಿ.