ಆರ್ಥಿಕ ತಜ್ಞರ ವಿರೋಧದ ನಡುವೆಯೂ ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿಯಂತಹ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದರ ಪರಿಣಾಮವಾಗಿ, ಇಂದು ಗ್ರಾಹಕರು ಕೊಳ್ಳುವ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಕೈಗಾರಿಕೆಗಳು, ಜವಳಿ ಉದ್ಯಮಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿದ್ದರೂ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಇದು ಹೀಗೇ ಮುಂದುವರಿದರೆ, ಕೈಗಾರಿಕೆಗಳನ್ನು ಅವಲಂಬಿಸಿರುವ ಯುವಜನರ ಬದುಕು ಬೀದಿಪಾಲಾಗುತ್ತದೆ. ಆಗ ಸರ್ಕಾರವೇ ಅದಕ್ಕೆ ನೇರ ಹೊಣೆಯಾಗಬೇಕಾಗುತ್ತದೆ.