ಮಹಾರಾಷ್ಟ್ರದ ಭಂಡಾರ ನಗರದಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿದುರಂತದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ಸಾಧನಗಳು ಇಲ್ಲದಿದ್ದುದು, ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿ ವರ್ಷವೇ ಕಳೆದರೂ ಪ್ರಯೋಜನ ಆಗದಿದ್ದುದು, ಕಳಪೆ ಕಾಮಗಾರಿ, ದೋಷಪೂರಿತ ಕರೆಂಟ್ ವೈರಿಂಗ್ ಮತ್ತಿತರ ಲೋಪಗಳನ್ನು ಗಮನಿಸದೇ ಪಾಲಿಕೆ ಅಧಿಕಾರಿಗಳು ಆಸ್ಪತ್ರೆಗೆ ಪರವಾನಗಿ ನೀಡಿರುವುದು ಭ್ರಷ್ಟ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ.