ವಿಪತ್ತುಗಳಿಂದ ಉಂಟಾಗುವ ನಷ್ಟವನ್ನು ಲೆಕ್ಕ ಹಾಕಲು ಕೇಂದ್ರ ಮತ್ತು ರಾಜ್ಯ ಪ್ರತಿನಿಧಿಗಳ ಜಂಟಿ ಸಮಿತಿ ರಚಿಸಬೇಕು. ಪರಿಹಾರವನ್ನು ಕಾಲಮಿತಿಯಲ್ಲಿ ನೀಡುವಂತಾಗಬೇಕು. ಕೇಂದ್ರದಿಂದ ಸಂಪೂರ್ಣ ಪರಿಹಾರ ಬಿಡುಗಡೆಯಾಗುವಷ್ಟರಲ್ಲಿ ಮತ್ತೊಂದು ಮಳೆಗಾಲ ಹೊಸ್ತಿಲಲ್ಲಿ ಇರುತ್ತದೆ ಎನ್ನುವುದಾದರೆ, ಅದರಿಂದ ಪ್ರಯೋಜನವಾದರೂ ಏನು?