ಕೇಂದ್ರ ಸರ್ಕಾರವು ರಾಜ್ಯದ ನೆರೆ ಸಂತ್ರಸ್ತರಿಗಾಗಿಅಂತೂ ₹ 1200 ಕೋಟಿ ಮಧ್ಯಂತರ ಪರಿಹಾರ ನೀಡಿದೆ. ಬಿಡುಗಡೆಯಾದ ಹಣವನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗಿದೆ. ಸಂಸದರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಕಣ್ಗಾವಲಲ್ಲಿ ಪರಿಹಾರ ಕಾರ್ಯ ಕ್ರಮಬದ್ಧವಾಗಿ ನಡೆಯಬೇಕು.