ನಟ ‘ಸಂಚಾರಿ’ ವಿಜಯ್ ತಮ್ಮ ಗೆಳೆಯನೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಇಹಲೋಕವನ್ನು ತ್ಯಜಿಸಿದ್ದಾರೆ. ಇಬ್ಬರೂ ಸವಾರರು ಹೆಲ್ಮೆಟ್ ಧರಿಸದೆ ಇದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಸಮಾಜಕ್ಕೆ ಮಾದರಿಯಾಗಬೇಕಾದ ಇಂತಹ ಪ್ರಸಿದ್ಧ ವ್ಯಕ್ತಿಯೇ ಈ ರೀತಿ ಹೆಲ್ಮೆಟ್ ಧರಿಸದೆ ಕರ್ಫ್ಯೂ ಸಮಯದಲ್ಲಿ ರಸ್ತೆಯಲ್ಲಿ ಅಡ್ಡಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿರುವುದು ಸರಿಯಲ್ಲ.