ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಿದ್ಯಮಾನಕ್ಕೆ, ‘ವಿಷಯವನ್ನು ಒಪ್ಪದವರು ವಿಮರ್ಶಿಸಲಿ’ ಎಂಬ ಕೆಲವು ವಿಚಾರವಾದಿಗಳ ಅಭಿಪ್ರಾಯವು (ವಾ.ವಾ., ಫೆ. 10) ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯನ್ನು ಎಚ್ಚರಿಸುವಂತಿದೆ. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದದ್ದು ಸರಿಯಾದ ಪ್ರತಿಕ್ರಿಯೆ ಅಲ್ಲ. ಸಾಹಿತ್ಯಕ್ಕೆ ಸಾಹಿತ್ಯದಿಂದ ಉತ್ತರಿಸುವುದು ಯೋಗ್ಯಮಾರ್ಗ. ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತರವಲ್ಲ. ಆದರೆ ಭಗವಾನ್ ಅವರ ಅಭಿಪ್ರಾಯವು ಮಸಿ ಬಳಿಯುವಂತಹ ಆಕ್ರೋಶ ಭರಿಸುವಷ್ಟು ಕಠೋರವಾಗಿತ್ತು ಎಂಬುದು ಅಷ್ಟೇ ವಿವೇಚನೆಗೆ ಇಂಬು ಕೊಡುತ್ತದೆ.