ಬೆಳಿಗ್ಗೆ ಮನೆಯಲ್ಲಿ ಆಹಾರ ತಿಂದು ಬಂದರೆ ಮತ್ತೆ ಮನೆಗೇ ಹೋಗಿ ತಿನ್ನಬೇಕಾದ ಪರಿಸ್ಥಿತಿ ಇರುತ್ತದೆ. ಕೆಲವೊಮ್ಮೆ ದಿನಪೂರ್ತಿ ಹಸಿದುಕೊಂಡು ಇರುವ ಸಂದರ್ಭಗಳೂ ಇಲ್ಲದಿಲ್ಲ. ಪರಿಣಾಮವಾಗಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯ ಹದಗೆಡುತ್ತದೆ. ಹಸಿವಿನಿಂದ ತರಗತಿಯಲ್ಲಿ ಕುಳಿತು ಪಾಠ ಕೇಳಲೂ ಆಗುವುದಿಲ್ಲ. ಎಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೂ ಹಸಿದಿರುವೆಡೆ ಅದು ಪರಿಣಾಮ ಬೀರದು. ಅಕ್ಷರದಷ್ಟೇ ಅನ್ನಕ್ಕೂ ಮಹತ್ವ ನೀಡಿ, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರಬೇಕು. ಆ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಬೇಕು.