ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಯುವಜನರ ಉದ್ಯೋಗಕ್ಕೆ ಕುತ್ತು ಬಾರದಿರಲಿ

Last Updated 4 ಜನವರಿ 2021, 16:51 IST
ಅಕ್ಷರ ಗಾತ್ರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಕಂದಾಯ ಇಲಾಖೆಯ ನಿವೃತ್ತರ ಸೇವೆಯನ್ನು ಪಡೆಯಲು ಮುಂದಾಗಿದೆ (ಪ್ರ.ವಾ., ಜ. 3). ಎರಡೆರಡು ಪದವಿಗಳನ್ನು ಪಡೆದಿದ್ದರೂ ಕೆಲಸವಿಲ್ಲದೆ ಯುವಜನರು ಪರಿತಪಿಸುತ್ತಿರುವಾಗ, ನಿವೃತ್ತಿ ಹೊಂದಿರುವವರನ್ನು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ನಿವೃತ್ತಿ ಆದವರಿಗೆ ವಯಸ್ಸಾಗಿರುತ್ತದೆ, ಅಲ್ಲದೆ ಅವರ ಜೀವನ ನಿರ್ವಹಣೆಗೆ ಪಿಂಚಣಿ ಬರುತ್ತಿರುತ್ತದೆ. ಹಾಗಿದ್ದರೆ ನಿರುದ್ಯೋಗಿ ಯುವಜನರು ಉದ್ಯೋಗಕ್ಕೆ ಏನು ಮಾಡಬೇಕು? ಗುತ್ತಿಗೆ ಆಧಾರದಲ್ಲಿ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತೆಗೆದುಕೊಳ್ಳದಂತೆ ನಿಯಮ ರೂಪಿಸಿ, ಆ ಮೂಲಕ ಯುವಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ನೆರವಾಗಬೇಕು.

ಉತ್ತಮ ಆಡಳಿತ ವ್ಯವಸ್ಥೆಯನ್ನು ತರುವುದಕ್ಕೆ ಪೂರಕವಾಗಿ, ನಿವೃತ್ತ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿಕೊಂಡು, ಅವರಿಂದ ಸಲಹೆ– ಸೂಚನೆಗಳನ್ನು ಪಡೆದುಕೊಳ್ಳಬಹುದು.

–ಗೌಡಯ್ಯ, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT