ಈ ಆದೇಶ ಹೊರಡಿಸಿ ಒಂದೂವರೆ ತಿಂಗಳು ಕಳೆದರೂ ಯಾವ ತಾಲ್ಲೂಕಿನಲ್ಲೂ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಈ ಕುರಿತು ತಾಲ್ಲೂಕು ಕಚೇರಿಗಳಲ್ಲಿ ವಿಚಾರಿಸಿದರೆ ಜಿಲ್ಲಾಧಿಕಾರಿಯಿಂದ ನಮಗಿನ್ನೂ ಸೂಚನೆ ಬಂದಿಲ್ಲ ಎಂಬ ಉತ್ತರ ಬರುತ್ತಿದೆ. ಕಂದಾಯ ಇಲಾಖೆಯ ಮೇಲಧಿಕಾರಿಗಳು ಇತ್ತ ಗಮನಹರಿಸಿ, ಇಲಾಖೆ ಹೊರಡಿಸಿರುವ ಆದೇಶವನ್ನು ಅನುಷ್ಠಾನಕ್ಕೆ ತರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು.