ಚುನಾವಣೆ ಸಮಯದಲ್ಲಿ ಈ ಪಕ್ಷಗಳು ಮತದಾರರಿಗೆ ಪ್ರಣಾಳಿಕೆಯ ಮೂಲಕ ಸಾಕಷ್ಟು ಭರವಸೆಗಳನ್ನು ನೀಡಿದ್ದವು. ಆದರೆ, ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೂ ರಾಜಕಾರಣಿಗಳು ಸ್ವಹಿತ ರಕ್ಷಣೆಗೆ ಹೋರಾಡುತ್ತಿದ್ದಾರೆಯೇ ಹೊರತು ರಾಜ್ಯದ ಅಭಿವೃದ್ಧಿಗಾಗಿ ಅಲ್ಲ. ಈಗಿನ ಸರ್ಕಾರ ಹಣ ಬಿಡುಗಡೆ ಮಾಡದಿರುವುದರಿಂದ, ಹಿಂದಿನ ಸರ್ಕಾರ ಘೋಷಿಸಿದ್ದಂತಹ ಯೋಜನೆಗಳ ಕಾಮಗಾರಿಗಳು ಅರ್ಧಕ್ಕೇ ನಿಂತಿವೆ. ಈ ನಡುವೆ, ಎಲಿವೇಟೆಡ್ ಕಾರಿಡಾರ್ ಮತ್ತು ಉಕ್ಕಿನ ಸೇತುವೆಯಂತಹ ಭಾರಿ ವೆಚ್ಚದ ಹೊಸ ಯೋಜನೆಗಳ ಬಗ್ಗೆ ಸರ್ಕಾರ ಮಾತಾಡುತ್ತಿರುವುದು ಸೋಜಿಗದ ಸಂಗತಿ.