ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮ ಗ್ರಾಮೀಣ ಸಮಸ್ಯೆಗಳ ಪರಿಹಾರಕ್ಕೆ ಹೇತುವಾಗಲಿ. ಆದರೆ, ಕೆಲ ರಾಜಕೀಯ ಮುಖಂಡರು ಪಕ್ಷದ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಅಳವಡಿಸಲು ದುಂದುವೆಚ್ಚ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ವಾಸ್ತವ್ಯವನ್ನು
ರಾಜಕೀಯಕರಣಗೊಳಿಸುತ್ತಿರುವುದು ವಿಪರ್ಯಾಸವೇ ಸರಿ.