ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಖಚಿತವಾಗುತ್ತಿರುವ ಅಂಶವೆಂದರೆ, ರಾಜ್ಯದ ಅಭಿವೃದ್ಧಿಗಾಗಿ ನಿಖರ ಮುನ್ನೋಟ ಇಲ್ಲದಿರುವುದನ್ನು ಮುಖ್ಯಮಂತ್ರಿಯಾದಿಯಾಗಿ ಇತರ ಎಲ್ಲಾ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದಾರೆ. ವೋಟು ಪಡೆಯಲು ಒಣ ಸಿದ್ಧಾಂತದ ಬುರುಡೆ ಬಿಟ್ಟಿದ್ದಾರೆ. ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಜಾತಿ ಸಮೀಕರಣದ ಲೆಕ್ಕ ಹಾಕಿ ವೋಟಿಗಾಗಿ ಆಯಾ ಜಾತಿಗಳ ಮೂಗಿಗೆ ತುಪ್ಪ ಸವರಿದ್ದಾರೆ ಮತ್ತು ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ.