ಹಾಸನ ಜಿಲ್ಲೆಯ ಹಳೇಬೀಡು ಸಮೀಪದ ಅಜ್ಜೇನಹಳ್ಳಿಯಲ್ಲಿ ಇತ್ತೀಚೆಗೆ ವೈಯಕ್ತಿಕ ದ್ವೇಷಕ್ಕೆ ರಾತ್ರೋರಾತ್ರಿ 600ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದುಹಾಕಿರುವುದು ಖಂಡನಾರ್ಹ. ಕುಟುಂಬಗಳ ನಡುವೆ ಅಥವಾ ಯಾವುದೋ ಹಳೆಯ ದ್ವೇಷಕ್ಕೆ ವ್ಯಕ್ತಿಯನ್ನು ನೇರಾನೇರ ಎದುರಿಸಲಾಗದೆ ಅಡಿಕೆ ಮರಗಳನ್ನು ತುಂಡರಿಸುವ ಅನೇಕ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿವೆ. ಲಕ್ಷಾಂತರ ರೂಪಾಯಿ ಸಾಲಸೋಲ ಮಾಡಿ, ನಾಲ್ಕೈದು ವರ್ಷ ಕಷ್ಟಪಟ್ಟು ಮಕ್ಕಳಂತೆ ಸಾಕಿ ಬೆಳೆಸಿದ ಮರಗಳನ್ನು ಹೀಗೆ ಕಡಿದು ಹಾಕಿದರೆ, ಆ ಬಡಪಾಯಿ ರೈತನಿಗೆ ಹೇಗಾಗ ಬಹುದು ಎಂಬುದು ಊಹಿಸಲು ಅಸಾಧ್ಯ.