ಹಾವೇರಿಯಲ್ಲಿ ನವೆಂಬರ್ 11ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ನಿಗದಿತ ದಿನಗಳಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ಇದು, ಬೇಸರದ ಸಂಗತಿ. ರಾಜ್ಯ ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಈ ಕುರಿತು ಸಕಾರಾತ್ಮಕವಾಗಿ ಚಿಂತನೆ ಮಾಡಬೇಕು. ಸಮ್ಮೇಳನಕ್ಕೆ ಅಗತ್ಯವಾದ ಹಣ ಕೂಡಲೇ ಒದಗಿಸುವ ಕೆಲಸ ಆಗಬೇಕು. ಸಮ್ಮೇಳನದ ಲಾಂಛನ ಬಿಡುಗಡೆ ಮಾಡುವಂತಹ ಪ್ರಕ್ರಿಯೆಗಳನ್ನು ಚುರುಕಾಗಿ ನಡೆಸಬೇಕು. ಈಗಾಗಲೇ ನಿಗದಿ ಆಗಿರುವ ದಿನಗಳಲ್ಲೇ ಸಮ್ಮೇಳನ ನಡೆಯುವಂತೆ ನೋಡಿಕೊಳ್ಳಬೇಕು.