ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ: ನಿಗದಿಯಂತೆ ನಡೆಯಲಿ

Last Updated 5 ಅಕ್ಟೋಬರ್ 2022, 17:55 IST
ಅಕ್ಷರ ಗಾತ್ರ

ಹಾವೇರಿಯಲ್ಲಿ ನವೆಂಬರ್‌ 11ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ನಿಗದಿತ ದಿನಗಳಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ಇದು, ಬೇಸರದ ಸಂಗತಿ. ರಾಜ್ಯ ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಈ ಕುರಿತು ಸಕಾರಾತ್ಮಕವಾಗಿ ಚಿಂತನೆ ಮಾಡಬೇಕು. ಸಮ್ಮೇಳನಕ್ಕೆ ಅಗತ್ಯವಾದ ಹಣ ಕೂಡಲೇ ಒದಗಿಸುವ ಕೆಲಸ ಆಗಬೇಕು. ಸಮ್ಮೇಳನದ ಲಾಂಛನ ಬಿಡುಗಡೆ ಮಾಡುವಂತಹ ಪ್ರಕ್ರಿಯೆಗಳನ್ನು ಚುರುಕಾಗಿ ನಡೆಸಬೇಕು. ಈಗಾಗಲೇ ನಿಗದಿ ಆಗಿರುವ ದಿನಗಳಲ್ಲೇ ಸಮ್ಮೇಳನ ನಡೆಯುವಂತೆ ನೋಡಿಕೊಳ್ಳಬೇಕು.

ಎಚ್.ಪಿ.ಯಮನಪ್ಪ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT